Tuesday 6 April 2010

ಬೆಳಕಿಗೆ ಬಾರದ ಹೋರಾಟದ ತಲೆಗಳು ಮತ್ತು ಮುನ್ನುಡಿ ಬರೆದ ಕೈಗಳು...............






ಗೆಳೆಯರೆ..........

ಕರ್ನಾಟಕದಲ್ಲಿ ಇದೇ ಪ್ರಪಥಮ ಬಾರಿಗೆ ರೇಲ್ವೆ ನೇಮಕಾತಿ ಪರೀಕ್ಷೆಗಳು ನಮ್ಮ ರಾಜ್ಯ ಭಾಷೆ ಕನ್ನಡದಲ್ಲಿ ನಡೆಯುತ್ತಿವೆ. ಇದರಿಂದ ಕನ್ನಡ ಮಾದ್ಯಮ ವಿದ್ಯಾರ್ಥಿಗಳಿಗೆ ಆಗುವ ಲಾಭ ಅಷ್ಟಿಷ್ಟಲ್ಲ. ಅದಕ್ಕಾಗಿಯೇ ಕನ್ನಡದಲ್ಲಿ ಪರೀಕ್ಷಾ ಮಾರ್ಗದರ್ಶಿ ಹೊತ್ತಿಗೆಗಳು ಬರಲಾರಂಭಿಸಿವೆ. ಕನ್ನಡದ ಸಾಮಾನ್ಯ ಜ್ನಾನದ ಹೊತ್ತಿಗೆಗಳು ಹೆಚ್ಚು ಹೆಚ್ಚು ಮಾರಾಟವಾಗುತ್ತಿವೆ. ಅಭ್ಯರ್ಥಿಗಳು ಹಿಂದಿನದಕ್ಕಿಂತ ಹೆಚ್ಚು ಉತ್ಸಾಹದಿಂದ ಪರೀಕ್ಷೆಗಳನ್ನು ಎದುರಿಸುತ್ತಿದ್ದಾರೆ. ಹಳ್ಳಿಯ ವಿದ್ಯಾರ್ಥಿಗಳಲ್ಲಂತೂ ಹೊಸ ಹೊಸ ಆಸೆಗಳು, ಹೊಸ ಹೊಸ ಬಯಕೆಗಳು ಚಿಗುರೊಡೆಯತೊಡಗಿವೆ. (ಇವು ಹೆಸರಿಸಲು ಮಾತ್ರ, ಇನ್ನು ಸಾಕಷ್ಟಿವೆ).
ಕರ್ನಾಟಕದಲ್ಲಿ ಆಗುತ್ತಿರುವ ಈ ಬದಲಾವಣೆಗಳಿಗೆ ಯಾರು ಕಾರಣರು ಎಂದು ಕೇಳಿದರೆ ಹೆಚ್ಚಿನವರು ಬೆರಳು ತೋರಿಸುವುದು ಕೇಂದ್ರ ರೇಲ್ವೆ ಸಚಿವೆ ಮಮತಾ ಬ್ಯಾನರ್ಜಿ, (ಒಂದು ವಿಧದಲ್ಲಿ ಅಭಿನಂದನಾರ್ಹರು) ಕೇಂದ್ರ ರೇಲ್ವೆ ಸಹಾಯಕ ರಾಜ್ಯ ಸಚಿವ ಹೆಚ್. ಮುನಿಯಪ್ಪ, ಮತ್ತೊಬ್ಬ ಸಚಿವ ವೀರಪ್ಪ ಮೊಯ್ಲಿ (ಇಬ್ಬರೂ ಲೋಕಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಲು ನಿರಾಕರಿಸಿದಂಥ ಕನ್ನಡಿಗರು) ಇಟಿಸಿ, ಇಟಿಸಿ.............
ಆದರೆ ಈ ಸಾದನೆಯ ಹಿಂದೆ ಇರುವ ನಿಜವಾದ ತಲೆಗಳೆಂದರೆ, ಈ ಬದಲಾವಣೆಗೆ ಮುನ್ನುಡಿ ಬರೆದ ಶುಧ್ಧ ಕೈಗಳೆಂದರೆ ನಮ್ಮ ಕನ್ನಡ ಪರ ಹೋರಾಟಗಾರರು. ಅವರ ನಿರಂತರ ಹೋರಾಟ, ಸತತ ಒತ್ತಡದ ಪರಿಣಾಮವಾಗಿ ಇಂದು ಕನ್ನಡದಲ್ಲಿ ರೇಲ್ವೆ ನೇಮಕಾತಿ ಪರೀಕ್ಷೆಗಳನ್ನು ಬರೆಯಬಹುದಾಗಿದೆ. ಇದನ್ನು, ನಮ್ಮನ್ನಾಳಿದ ’ಕೈ’ ಯಲ್ಲಿ ’ಕಮಲ’ದ ಹೂವನ್ನು ಹಿಡಿದ ’ಮಣ್ಣಿನ ಮಕ್ಕಳು’ ಇನ್ನೂ ೫೦ ವರ್ಷ ರಾಜ್ಯವನ್ನಾಳಿದ್ದರೂ ಸಾದಿಸಲಾಗುತ್ತಿರಲಿಲ್ಲ. ಯಾವ ರಾಜಕೀಯ ಪಕ್ಷವು (ಇಡೀ ದೇಶದಲ್ಲಿ) ಮಾಡದಂಥ ಇಂಥ ಸಾದನೆಯನ್ನು ನಮ್ಮ ಕನ್ನಡ ಪರ ಹೋರಾಟಗಾರರು ಮಾಡಿದ್ದು ನಿಜಕ್ಕೂ ಎದೆ ತಟ್ಟಿ ಹೆಮ್ಮೆಯಿಂದ ಹೇಳಿಕೊಳ್ಳುವಂತಹ ವಿಷಯ. ಇದರಿಂದ ಕೇವಲ ಕನ್ನಡಕ್ಕಷ್ಟೆ ಅಲ್ಲದೇ ದೇಶದಲ್ಲಿರುವ ಎಲ್ಲ ಪ್ರಾದೇಶಿಕ ಭಾಷೆಗಳಿಗೂ ಲಾಭವಾಗಲಿದೆ. ಎಲ್ಲ ಪ್ರಾದೇಶಿಕ ಭಾಷೆಯ ಅಭ್ಯರ್ಥಿಗಳು ಇದರ ಲಾಭ ಪಡೆಯಲಿದ್ದಾರೆ. ಆದರೆ ವಿಪರ್ಯಾಸವೆಂದರೆ ಹೆಚ್ಚಿನವರಿಗೆ ಇದರ ಹಿಂದಿರುವ ಕೈಗಳ ಬಗ್ಗೆ, ಆ ಹೋರಾಟಗಾರರ ಬಗ್ಗೆ ಅರಿವೇ ಇಲ್ಲ. ಹೋರಾಟದ ಹಾದಿಯಲ್ಲಿ ಹೋರಾಟಗಾರರು ಅನುಭವಿಸಿದ ಕಷ್ಟ, ಯಾತನೆಗಳನ್ನು ಅಷ್ಟು ಸಲೀಸಾಗಿ ಮರೆಯಲು ಸಾದ್ಯವೇ...?
ಏನಿದು ವ್ಯವಸ್ಥೆ..? ಕನ್ನಡವನ್ನು ಕಡೆಗಣಿಸಿದವನಿಗೆ ಕನ್ನಡದ ಸಾದನೆಯ ಕಿರೀಟ,, ಮೂರು ಹೊತ್ತು ಕನ್ನಡ ಕನ್ನಡಿಗ ಕರ್ನಾಟಕ ಎಂದು ಜಪಿಸುತ್ತಿರುವವರಿಗೆ,, ಪೋಲಿಸರ ಲಾಠಿ ಏಟು, ನೂರಾರು ಕೇಸುಗಳು, ಹತ್ತಾರು ದಿನಗಳ ಜೈಲು ವಾಸ, ಕುಟುಂಬದಿಂದ ದೂರವಿದ್ದವರಿಗೆ ಇದರ ಅಭಿನಂದನಾರ್ಹರ ಪಟ್ಟಿಯಲ್ಲಿ ಸ್ಥಾನವೇ ಇಲ್ಲ. ಇಷ್ಟೆಲ್ಲ ಇವರು ಮಾಡುತ್ತಿರುವುದು ಯಾರ ಸಲುವಾಗಿ...? ಕನ್ನಡದ ಮಕ್ಕಳ ಸಲುವಾಗಿ, ಕನ್ನಡ ಮಾದ್ಯಮದಲ್ಲಿ ಕಲಿತು ಒಂದು ರೀತಿಯ ಸಮಾಜದ ನಿರ್ಲಕ್ಷ ಮನೋಭಾವನೆಯಿಂದ ನೊಂದಿರುವ ಕನ್ನಡ ಮಕ್ಕಳ ಹೆತ್ತವರ ಸಲುವಾಗಿ, ಕನ್ನಡವನ್ನು ಕಲಿತರೆ ಕೆಲಸ ಸಿಗುವುದಿಲ್ಲ ಎಂಬ ಸ್ವಯಂ ಘೋಷಿತ ಅಪನಂಬಿಕೆಯಿಂದ ಜನರನ್ನು ದೂರ ಮಾಡುವ ಸಲುವಾಗಿ. ನಿಜವಾಗಿಯೂ ಕನ್ನಡಿಗರು ಅಭಿನಂಧನೆ, ಧನ್ಯವಾದಗಳನ್ನು ಸಲ್ಲಿಸಬೇಕಾಗಿರುವುದು ಹಗಲಿರುಳು ಹೋರಾಡಿದ ಕನ್ನಡ ಪರ ಹೋರಾಟಗಾರರಿಗೆ ಹೊರತು ಬೆಳ್ಳಿ ತಟ್ಟೆಯಲ್ಲಿ ಊಟ ಮಾಡಿ, ಹವಾನಿಯಂತ್ರಿತ ಕೊಠಡಿಯಲ್ಲಿ ೨೪*೭ ರಾಜಕೀಯ ಲೆಕ್ಕಾಚಾರದಲ್ಲಿ ಮುಳುಗುವಂಥ ನಿರಾಭಿಮಾನಿ ರಾಜಕಾರಣಿಗಳಿಗಲ್ಲ.
ಈ ವ್ಯವಸ್ಥೆಗೆ ನಮ್ಮದೊಂದು ಧಿಕ್ಕಾರ.............

ಕೊನೆಯ ರೈಲು (ಅಲ್ಲ, ರೀಯಲ್ಲು) : ‘ವೀರ ಕನ್ನಡಿಗ’ ಚಿತ್ರದ ಈ ಹಾಡು ನಿಜವಾಗಿಯೂ ಕನ್ನಡ ಪರ ಹೋರಾಟಗಾರರಿಗೆ ಹೇಳಿ ಮಾಡಿಸಿದ ಹಾಡು.

ಜೀವ ಕನ್ನಡ, ದೇಹ ಕನ್ನಡ, ಬಾಳು ಕನ್ನಡ ನಮಗಿಂದು, ನಮ್ಮ ನಿದ್ರೆ ಕಳೆಯುತ್ತಿದ್ದರೆ ಸಹಿಸುವವ ನೀನಲ್ಲ...............
ಕೆಂಪು ಹಳದಿ ಭಾವುಟಕ್ಕೆ ನೀನೆ ತಾನೇ ಭಾವುದಂಡ, ನಿನ್ನ ಯುಧ್ಧ ಸತ್ಯ ಶುಧ್ಧ ನಡೆದರೆ ಸೋಲಿಲ್ಲ...............
ನಮಗಾಗಿ ಹುಟ್ಟಿದ ನೀನು ಕಾಪಾಡೊ ಕಾಮಧೇನು ಜ್ವಾಲಾಮುಖಿ ವೈರಿಗೆ............
ಹೇ ಧೀರ, ಹೇ ಧೀರ ಎದುರಾರೊ..? ನಿನಗೆ
ಮನೆ ದೀಪ ಮನೆ ಬೇಲಿ ನಿನಾದೆ ನಮಗೆ..
ಹೇ....................................................
ನಾಡು ಕರುನಾಡು ಎಲ್ಲಾ ನಿನ್ನದು,
ನೀ ತಂದ ವಿಜಯ ಸದಾ ನಮ್ಮದು.
ಜೀವ ಕನ್ನಡ, ದೇಹ ಕನ್ನಡ, ಬಾಳು ಕನ್ನಡ ನಮಗಿಂದು, ನಮ್ಮ ನಿದ್ರೆ ಕಳೆಯುತ್ತಿದ್ದರೆ ಸಹಿಸುವವ ನೀನಲ್ಲ...............